
ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ABVP ಪ್ರತಿಭಟನೆ
Thursday, September 16, 2021
Comment
ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ವ್ಯಾಪಿಸಲಾರಂಭಿಸಿದ ಬಳಿಕ ಸ್ಥಗಿತಗೊಂಡಿದ್ದ ಶಾಲಾ ಕಾಲೇಜುಗಳು ಈಗ ಹಂತಹಂತವಾಗಿ ಪುನರಾರಂಭಗೊಂಡಿವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 6ನೇ ತರಗತಿಯಿಂದ ಆರಂಭಗೊಂಡು, ಎಸೆಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ತರಗತಿಗಳೆಲ್ಲವೂ ಮತ್ತೆ ತೆರೆದುಕೊಂಡಿರುವುದು ಸ್ವಾಗತಾರ್ಹ.ಆದರೆ ಈಗ ಭೌತಿಕ ತರಗತಿಗಳು ಆರಂಭಗೊಂಡ
ಬಳಿಕ ದಿನಕ್ಕೊಂದು ಸಮಸ್ಯೆ ಉದ್ಭವವಾಗುತ್ತಿದೆ.ಈ ಕೆಳಗೆ ಉಲ್ಲೇಖಿಸಿದ ಪ್ರಮುಖ ಅಂಶಗಳನ್ನು ರಾಜ್ಯ ಸರಕಾರ ತಕ್ಷಣಕ್ಕೆ ಇತ್ಯರ್ಥಗೊಳಿಸಬೇಕೆಂದು ಅಭಾವಿಪ ಒತ್ತಾಯಿಸುತ್ತವೆ.
1) ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಎಲ್ಲ ಗ್ರಾಮಗಳಿಗೂ ಬಸ್ ಸೇವೆ ಪುನರಾರಂಭಿಸಿ.
ಶಾಲೆ-ಕಾಲೇಜುಗಳು ಆರಂಭವಾಗಿ ವಿದ್ಯಾರ್ಥಿಗಳು ಕಲಿಕೆಯ ಕಡೆಗೆ ಉತ್ಸಾಹದಿಂದ ಗಮನ ಹರಿಸಿದ್ದಾರೆ. ಕೋವಿಡ್ ಕಾರಣಕ್ಕೆ ಬದಲಾದ
ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ
(ಕೆಎಸ್ಆರ್ಟಿಸಿ) ಎಲ್ಲ ಬಸ್ಗಳು ಸೇವೆ ಒದಗಿಸುತ್ತಿವೆ. ಆದರೂ, ಲಾಕ್ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ
ಇನ್ನೂ ಪುನರಾರಂಭವಾಗಿಲ್ಲ. ದಿನಕ್ಕೆ ಒಂದು ಅಥವಾ ಎರಡು ಬಸ್ಗಳು ಮಾತ್ರ ಸಂಚರಿಸುತ್ತಿವೆ .ಇದರಿಂದಾಗಿ ರಾಜ್ಯದ ಗ್ರಾಮೀಣ
ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರ ತೊಂದರೆಯಾಗಿ ಪರಿಣಮಿಸಿದೆ.
2) ಶಿಷ್ಯವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಿ,
ಡಿಪ್ಲೋಮಾ ಇಂಜಿನಿಯರಿಂಗ್, ಸ್ನಾತಕ - ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿ.ಎಚ್.ಡಿ ಮಾಡುತ್ತಿರುವ ಪ.ಜಾತಿ, ಪ.ಪಂಗಡ,
ಹಿಂದುಳಿದ ವರ್ಗಗಳ
ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ
ಪ್ರಮಾಣದಲ್ಲಿ ಶಿಷ್ಯವೇತನ
ಪರದಾಡುವಂತಾಗಿದೆ.ರಾಜ್ಯ ಸರಕಾರ ಈ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ
ವಿದ್ಯಾರ್ಥಿವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕೆಂದು ಮತ್ತು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿವೇತನದ
ಮೊತ್ತವನ್ನು ಹೆಚ್ಚಿಗೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತ ಸರಕಾರಕ್ಕೆ ಆಗ್ರಹಿಸುತ್ತದೆ.
3) ಹಾಸ್ಟೆಲಗಳನ್ನು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪ್ರಾರಂಭಿಸಿ, ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ,ಬಯಸಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಗೆ ತುಂಬಾ ಆಂತರವಿದ.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಡ ಮತ್ತು ಕರ್ನಾಟಕದಲ್ಲಿ ಸುಮಾರು ಈ ವರ್ಷ 15 ಲಕ್ಷ ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಸ್ಟೆಲ್ ಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ಪ್ರತಿಭಾವಂತ ವಿದ್ಯಾರ್ಥಿಗಳ ಹಿತದೃಷ್ಟಿಯಲ್ಲಿ ಸರಕಾರ ತಕ್ಷಣಕ್ಕೆ ವಸತಿನಿಲಯಗಳ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು ಮತ್ತು
ಸಂಭವವಿದ್ದು ಆದರೆ ಕಳೆದವರ್ಷ ಪ್ರಕಾರ ಕೇವಲ ಎರಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಮಾತ್ರ ವಸತಿನಿಲಗಳಲ್ಲಿ ಪ್ರವೇಶ ಪಡೆಯಲು
ಅವಕಾಶವಿದ್ದು, ಇನ್ನುಳಿದ 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಮಾಸ್ಟಲ್ ಸೌಲಭ್ಯದಿಂದ ವಂಚಿತರಾಗುತ್ತಿದ್ದು, ಸರ್ಕಾರ ಬಡ ಮತ್ತು
ಪ್ರತಿಭಾವಂತ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ವರ್ಷದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಹಾಸ್ಟೆಲ್ ಗಳನ್ನು ತೆರಿಯಬೇಕಿದೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಿದೆ ಎಂದು ಮನವಿ ಸಲ್ಲಿಸಿದರು.
ವರದಿ: ರಘು ನರಗುಂದ
0 Response to "ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ABVP ಪ್ರತಿಭಟನೆ"
Post a Comment